ಕಾರವಾರ:- ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾ ದ ಅಳಿವೆ ಪ್ರದೇಶದಲ್ಲಿ ನಡೆದಿದೆ.
ಇಂದು ಹೊನ್ನಾವರದ ಬಂದರಿನಿಂದ ಮೀನಯಗಾರಿಕೆಗೆ ತೆರಳಿತ್ತು ಬರುವ ಮಧ್ಯದಲ್ಲಿ ಅಳವೆ ಪ್ರದೇಶದಲ್ಲಿ ಹೂಳು ತುಂಬಿದ್ದರಿಂದ ಇಂಜಿನ್ ಗೆ ಸಮಸ್ಯೆಯಾಗಿ ಮುಳುಗಡೆ ಆಗಿದೆ. ಬೋಟ್ ನಲ್ಲಿದ್ದ 6 ಜನ ಮೀನುಗಾರರನ್ನು ಕರಾವಳಿ ಕಾವಲು ಪಡೆ ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಶ್ರೀ ಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್ ಮಾಲಕತ್ವದ ಬೋಟ್ ಇದಾಗಿದ್ದು ಬೋಟ್ ಮುಳುಗಡೆಯಿಂದ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳ ನಷ್ಟವಾಗಿದೆ.