ಕಾರವಾರ :- ನದಿ ದಂಡೆಯ ಮೇಲೆ ಮೀನಿ ಹಿಡಿಯಲು ಗಾಳಹಾಕಿ ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿ ದಡದಲ್ಲಿ ಭಾನುವಾರ ಸಂಜೆ ನಡೆದಿದೆ.ಮೋಹಿನ್ ಮೆಹಬೂಬ್ (15) ಮೊಸಳೆ ಪಾಲಾದ ಬಾಲಕನಾಗಿದ್ದು ಈತ ಮೀನು ಹಿಡಿಯಲು ದಾಂಡೇಲಿ-ಹಳಿಯಾಳ ರಸ್ತೆಯ ಕಾಳಿ ನದಿ ದಡದಲ್ಲಿ ಕುಳಿತಿದ್ದ.
ಈ ವೇಳೆ ಮೊಸಳೆ ದಾಳಿಮಾಡಿದ್ದು ಈತನನ್ನು ಹೊತ್ತೊಯ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು,ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಶೋಧ ಕಾರ್ಯ ನಡೆಸಿದರೂ ಆತನ ಪತ್ತೆಯಾಗಿಲ್ಲ. ಸೂಪಾ ಜಲಶಾಯದಿಂದ ಹರಿದುಬರುತ್ತಿರುವ ನೀರನ್ನು ಸಹ ಬಂದ್ ಮಾಡಲಾಗಿತ್ತು .ಆದರೇ ಈವರೆಗೂ ಬಾಲಕನ ಶವ ಸೋಮವಾರವೂ ಪತ್ತೆಯಾಗಿಲ್ಲ.