Bhatkal-ಮತ್ತೆ ಕಲ್ಲುತೂರಾಟ: ಗಣಪತಿ ಪೆಂಡಾಲ್‌ ಮೇಲೆ ದುಷ್ಕರ್ಮಿಗಳ ಕಲ್ಲಿನ ದಾಳಿ ಸುದ್ದಿ, ನಂತರ ಆಗಿದ್ದೇನು?

Stone pelting reported at a Ganapati pandal in Bhatkal during Ganapati visarjan preparations Stone pelting reported at a Ganapati pandal in Bhatkal during Ganapati visarjan preparations
Stone pelting reported at a Ganapati pandal in Bhatkal during Ganapati visarjan preparations

IMG 20260913 WA0009Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಇಂದು ಗಣಪತಿ ವಿಸರ್ಜನೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆ ಗಣಪತಿ ಪೆಂಡಾಲ್‌ ಮೇಲೆ ಕಲ್ಲುತೂರಾಟ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ:-Bhatkal : ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣ ಆರೋಪಿಗಳಿಗೆ ಜಾಮೀನು

(Bhatkal)ಭಟ್ಕಳ ನಗರದ ತಾಲೂಕು ರಿಕ್ಷಾ ಚಾಲಕ ಮಾಲೀಕರ ಕ್ಷೇಮಾಭಿವೃದ್ಧಿ ಟ್ರಸ್ಟ್‌ ವತಿಯಿಂದ ನಿರ್ಮಿಸಲಾಗಿದ್ದ ಗಣಪತಿ ಪೆಂಡಾಲ್‌ನ ಹಿಂಭಾಗದಿಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

Advertisement

ಕಲ್ಲುತೂರಾಟದ ಮಾಹಿತಿ ತಿಳಿಯುತ್ತಿದ್ದಂತೆ ಭಟ್ಕಳ ಶಹರಾ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇಂದು ಗಣಪತಿ ವಿಸರ್ಜನೆಗೆ ಸಿದ್ಧವಾಗಿದ್ದ ಸಮಿತಿಯ ಪೆಂಡಾಲ್‌ ಮೇಲೆ ವಿಸರ್ಜನೆ ಸಮಯದಲ್ಲೇ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ:Karwar | ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿ |ಎಲ್ಲಿ ಏನಾಯ್ತು ? ವಿವರ ನೋಡಿ

ಘಟನೆಗೆ ಸಂಬಂಧಿಸಿದಂತೆ ಸಂಘದ ಅಧ್ಯಕ್ಷ ಮಂಜುನಾಥ ಗಣಪತಿ ನಾಯ್ಕ ಅವರು ಭಟ್ಕಳ ಶಹರಾ ಠಾಣೆಯಲ್ಲಿ ಎಸ್.ಪಿ ದೀಪನ್ ಗೆ ಮನವಿ ನೀಡಿದ್ದಾರೆ. ಇದನ್ನೂ ಓದಿ:-Bhatkal- ದಾಂಡೇಲಿ ಆಯ್ತು ಇದೀಗ ಭಟ್ಕಳದಲ್ಲಿ ಮೊಸಳೆ ಪ್ರತ್ಯಕ್ಷ

ಪೊಲೀಸರ ತನಿಖೆ -ಸಿಕ್ಕಿದ್ದು ಕ್ರಿಕೆಟ್ ಬಾಲ್.

ಇನ್ನು ಪೊಲೀಸರು ತನಿಖೆ ನಡೆಸಿ ಸ್ಥಳ ಪರಿಶೀಲನೆ ನಡೆಸಿದಾಗ ಕ್ರಿಕೆಟ್ ಬಾಲ ಸಿಕ್ಕಿದೆ. ಪಕ್ಕದಲ್ಲೇ ಮೈದಾನ ಇದ್ದು ಮಕ್ಕಳು ಕ್ರಿಕೆಟ್ ಆಡಿದಾಗ ಪೆಂಡಾಲ್ ಮೇಲೆ ಬಾಲ್ ಬಿದ್ದಿರುವ ಬಗ್ಗೆ ಎಸ್.ಪಿ ದೀಪನ್ ರವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.ಪೆಂಡಾಲ್ ಮೇಲೆ ಕಲ್ಲು ಎಸೆದಿಲ್ಲ ,ಬಾಲ್ ಬಿದ್ದಿರುವುದು ಎಂದು ಸ್ಪಷ್ಟೀಕರಣ ನೀಡಲಾಗಿದೆ. 

ಇಂದು ಭಟ್ಕಳ ನಗರದಲ್ಲಿ ನಾಲ್ಕು ಗಣಪತಿ ಮೂರ್ತಿಗಳ ವಿಸರ್ಜನೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

Stone pelting reported at a Ganapati pandal in Bhatkal during Ganapati visarjan preparations
ಎಸ್.ಪಿ ರವರಿಗೆ ಮನವಿ ನೀಡುತ್ತಿರುವ ಸಂಘದ ಅಧ್ಯಕ್ಷ

ನಗರದಲ್ಲಿ RAF ಕಂಪನಿ, 3 KSRF ತುಕಡಿಗಳು ಹಾಗೂ 5 ಡಿಆರ್ ತುಕಡಿಗಳು ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದಾದ್ಯಂತ ಸಿಸಿ ಕ್ಯಾಮೆರಾಗಳ ಮೂಲಕವೂ ನಿಗಾ ವಹಿಸಲಾಗುತ್ತಿದೆ.

ಘಟನೆಯ ಹಿನ್ನೆಲೆಯಲ್ಲಿ ಎಸ್‌ಪಿ ದೀಪನ್ ಎಂ.ಎನ್. ಅವರು ಭಟ್ಕಳದಲ್ಲೇ ಮೊಕ್ಕಾಂ ಹೂಡಿ ಭದ್ರತಾ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

Kannadavani WhatsApp image
ಪ್ರತಿ ದಿನದ ಸುದ್ದಿ ಓದಲು ನಮ್ಮ ವಾಟ್ಸ್ ಅಪ್ ಗ್ರೂಪ್ ಸೇರಲು ಫೋಟೋ ದ ಮೇಲೆ ಕ್ಲಿಕ್ ಮಾಡಿ
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement