ಶಿರಸಿ:-ಹಾವೇರಿಯಿಂದ ಶಿರಸಿಗೆ ಬರುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ
ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ
ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ರಾತ್ರಿ ನಡೆದಿದೆ.
ಪ್ರಕಾಶ ಲಿಂಗಪ್ಪ ಗೌಡ ಸಂತೋಳ್ಳಿ (50) ಗಾಯಗೊಂಡ ಬೈಕ್ ಸವಾರನಾಗಿದ್ದು ಶಿರಸಿಯ ಪಂಡಿತ ಸಾರ್ವಜನಿಕ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬನವಾಸಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ,ಬನವಾಸಿ ಪಿ.ಎಸ್.ಐ. ಹನುಮಂತ ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.