ಕಾರವಾರ:- ಆಹಾರ ಅರಸಿ ನದಿ ಭಾಗದಿಂದ ಮೊಸಳೆಯೊಂದು ಗ್ರಾಮಕ್ಕೆ ನುಗ್ಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ಇಂದು ನಡೆದಿದೆ. ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ನುಗ್ಗಿ ರಸ್ತೆಯಲ್ಲಿ ವಾಕ್ ಮಾಡಿದೆ. ಬೆಳಂಬೆಳಗ್ಗೆ ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು ನೋಡಿದ
ಗ್ರಾಮದ ಜನರು ಬೆಚ್ವಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೇ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದ ಮೊಸಳೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ.
ವಿಡಿಯೊ ನೊಡಿ:-
ದಾಂಡೇಲಿಯ ಕಾಳಿ ನದಿಯಲ್ಲಿ ಸಾವಿರಾರು ಮೊಸಳೆಗಳು ವಾಸವಾಗಿವೆ. ಆದರೇ ನದಿಯನ್ನು ಬಿಟ್ಟು ಗ್ರಾಮಕ್ಕೆ ಇದೇ ಮೊದಲಬಾರಿ ಮೊಸಳೆ ಆಗಮಿಸಿದ್ದು ಜನರನ್ನು ಬೆಚ್ಚಿ ಬೀಳಿಸಿದೆ.
ಈ ಹಿಂದೆ ನದಿ ಭಾಗದಲ್ಲಿ ಮೊಸಳೆಗಳು ಮನುಷ್ಯನ ಮೇಲೆ ಎರಗಿ ಸಾವು ಗಳಾದ ಘಟನೆ ಸಹ ಈ ಭಾಗದಲ್ಲಿ ನಡೆದಿದೆ. ದಾಂಡೇಲಿಯ ಕಾಗದ ಕಾರ್ಖಾನೆ ಬಳಿ ನದಿ ತಡದಲ್ಲಿ ಅತೀ ಹೆಚ್ಚು ಮೊಸಳೆಗಳು ವಾಸಿಸುತ್ತಿವೆ. ಕಾರ್ಖಾನೆಯ ತ್ಯಾಜ್ಯಗಳೇ ಇವುಗಳಿಗೆ ಆಹಾರವಾಗಿದ್ದು ಲಾಕ್ ಡೌನ್ ನಿಂದ ಜನರ ಓಡಾಟ ಸಹ ಈ ಪ್ರದೇಶಗಳಲ್ಲಿ ಇಳಿಮುಖವಾಗಿತ್ತು. ಹೀಗಾಗಿ ಆಹಾರ ಅರಸಿ ಮೊಸಳೆಗಳು ನದಿ ದಡದಿಂದ ಸುತ್ತಮುತ್ತ ಓಡಾಟ ನಡೆಸುತಿದ್ದು ಇಂದು ಗ್ರಾಮಕ್ಕೆ ಮೊಸಳೆ ನುಗ್ಗಿದ್ದರಿಂದ ಇದೀಗ ಜನರಲ್ಲಿ ಮತ್ತೆ ಆತಂಕ ಪಡುವಂತಾಗಿದೆ.