Honnavar |ಅಂಕೋಲ ಮೂಲದ ಬೋಟ್ ಮುಳುಗಡೆ-ಏಳು ಜನರ ರಕ್ಷಣೆ-video ನೋಡಿ
ವಿಡಿಯೋ ನೋಡಿ:-
Honnavar/ಕಾರವಾರ :- ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ ಏಳು ಜನ ಮೀನುಗಾರರನ್ನ ರಕ್ಷಣೆ ಮಾಡಿದ ಘಟನೆ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (honnavar) ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ನಡೆದಿದೆ. ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಕಾರ್ವಿ ಎಂಬುವವರ ಮಾಲಿಕತ್ವದ ಶ್ರೀ ನವರತ್ನ ಹೆಸರಿನ ಬೋಟ್ ಹೊನ್ನಾವರದ ತಾರೇಬಾಗಿಲು ಸಮೀಪ ಮೀನುಗಾರಿಕೆ ನಡೆಸುವಾಗ ಬೋಟಿನ ಹೊರಭಾಗಕ್ಕೆ ಹಾನಿಯಾದ್ದರಿಂದ ಬೋಟ್ ಒಳಗೆ ನೀರು ತುಂಬಿ ಮುಳುಗಡೆಯಾಗಿದೆ.ತಕ್ಷಣ ಸ್ಥಳೀಯ ಮೀನುಗಾರಿಕಾ ಬೋಟ್ ನ ಇಕ್ಬಾಲ್ ಅಬ್ದುಲ್ ಗಫೂರ್ ಎಂಬುವವರು ತಮ್ಮ ಬೋಟ್ ನಿಂದ ಏಳುಜನ ಮೀನುಗಾರರ ರಕ್ಷಣೆ ಮಾಡಿದ್ದಾರೆ.
Honnavar |ಸಿಡಿಲು ಬಡಿದು ಮೀನುಗಾರ ಸಾವು,ಪ್ರವಾಸಿಗ ಗಂಭೀರ.
ವೆಂಕಟೇಶ್ ಖಾರ್ವಿ,ನಾಗಪ್ಪ ಖಾರ್ವಿ,ಸಂದೀಪ್ ಖಾರ್ವಿ,ವಿಕಾಸ್ ಖಾರ್ವಿ,ವಿಘ್ನೇಶ್ ಖಾರ್ವಿ,ರಜತ್ ಬಾಣಾವಳಿಕರ್, ಹಾಗೂ ಲತೇಶ್ ಖಾರ್ವಿ ರಕ್ಷಣೆಗೊಳಗಾದ ಮೀನುಗಾರರಾಗಿದ್ದು ಸುರಕ್ಷಿತವಾಗಿ ದಡ ಸೇರಿದ್ದಾರೆ. ಬೋಟ್ ಮುಳುಗಡೆಯಿಂದ ಅಂದಾಜು 50 ಲಕ್ಷಕ್ಕೂ ಹೆಚ್ಚು ನಷ್ಟವಾಗಿದ್ದು ,ಘಟನೆ ಸಂಬಂಧ ಹೊನ್ನಾವರ ಸಿ.ಎಸ್.ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
