ಹೊನ್ನಾವರ ತಾಲೂಕಿನ ಕಾಸರಕೋಡ ಹಿರೇಮಠ ವೀರ ಮಾರುತಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯ ಅಂದಾಜು 7 ಸಾವಿರ ನಗದು, ದೇವರ ಕೊರಳಿನ 20ಗ್ರಾಂ ತೂಕದ 80 ಸಾವಿರ ಮೌಲ್ಯದ ಬಂಗಾರದ ಸರವನ್ನು ಕಳ್ಳತನ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಹೊನ್ನಾವರ PSI ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.