ಕಾರವಾರ :- ನಾಳೆ ಕಾವೇರಿಗಾಗಿ ಕರ್ನಾಟಕ ಬಂದ್ ಗೆ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಶಾಲೆಗೆ ರಜೆ ನೀಡಲಾಗಿದೆ . ಆದ್ರೆ ಹಲವು ಪೋಷಕರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಇದೆಯಾ ಎಂಬ ಗೊಂದಲಗಳು ಮೂಡಿದ್ದವು.
ಆದ್ರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವುದೇ ಸಂಘಟನೆಯಾಗಲಿ ,ಪಕ್ಷವಾಗಲಿ ಬಂದ್ ಮಾಡುವ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ನೀಡಿಲ್ಲ. ಇದಲ್ಲದೇ ಜಿಲ್ಲೆಯಲ್ಲಿ ಯಾವುದೇ ಬಂದ್ ಸಹ ಮಾಡುತ್ತಿಲ್ಲ. ಹೀಗಾಗಿ ಎಂದಿನಂತೆ ಕಾರ್ಯಚಟುವಟಿಕೆಗಳು ನಡೆಯುತ್ತಿರುವುದರಿಂದ ಜಿಲ್ಲೆಯ ಶಿರಸಿ ಹಾಗೂ ಕಾರವಾರದ ಶೈಕ್ಷಣಿಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದ್ದು ಎಂದಿನಂತೆ ತರಗತಿಗಳು ನಡೆಯಲಿದೆ.