ಕಾರವಾರ :- ವಾಹನದ ಬಿಡಿ ಭಾಗಗಳನ್ನು ( vehicle spare parts )ತೆಯಾರಿಸುವ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ
ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕುಳಗಿಬೀಸ್ ನಲ್ಲಿ ನಡೆದಿದೆ.
ಇದನ್ನೂ ಓದಿ:-ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದ್ರೆ 1 ಲಕ್ಷ ಬಹುಮಾನ: ಸಚಿವ ದಿನೇಶ್ ಗುಂಡೂರಾವ್
ಮಶಿಗದ್ದೆಯ ರಾಘವ ವಿಶ್ವೇಶ್ವರ ಹೆಗಡೆ ಎಂಬುವವರ ಮಾಲೀಕತ್ವದ ಮಾನ್ಯ ಇಂಡಸ್ಟ್ರೀಸ್ (industries )ಎಂಬ ಹೆಸರಿನ ವಾಹನ ಬಿಡಿ ಭಾಗ ತಯಾರಿಕಾ ಕಾರ್ಖಾನೆ ಇದಾಗಿದ್ದು ಕಾರಿನ ಡ್ಯಾಷ್ ಬೋರ್ಡ್ ಮತ್ತಿತರ ವಸ್ತುಗಳನ್ನು ತಯಾಸುವ ಪೈಬರ್ ಫ್ಯಾಕ್ಟರಿ ಇದಾಗಿದೆ. ಬೆಂಕಿ ಕೆನ್ನಾಲಿಗೆಗೆ ಕಾರ್ಖಾನೆಯ ಬಹುತೇಕ ವಸ್ತುಗಳು ಸುಟ್ಟು ಹೋಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜುರಾಗಿ ಬೆಂಕಿ ನಂದಿಸುತಿದ್ದಾರೆ.ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.