karwar news:ಬೈಕ್ ಗೆ ಕಾರು ಡಿಕ್ಕಿ ಬಿಜೆಪಿ ಗ್ರಾಮೀಣ ವಿಭಾಗದ ಕಾರ್ಯದರ್ಶಿ ಸಾವು

296

ಕಾರವಾರ:- ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸದಾಶಿವ ಘಡದಲ್ಲಿ ನಡೆದಿದೆ.

ಮೃತ ಬೈಕ್ ಸವಾರ ತುಕರಾಮ್ ಎಂದು ಗುರುತಿಸಲಾಗಿದ್ದು ಈತ ಬಿಜೆಪಿ ಗ್ರಾಮೀಣ ಘಟಕದ ಕಾರ್ಯದರ್ಶಿಯಾಗಿದ್ದಾನೆ.

ಗೋವಾ ಕಡೆಯಿಂದ ಕಾರವಾರ ಮಾರ್ಗವಾಗಿ ತೆರಳುತಿದ್ದ ಶಿಫ್ಟ್ ಕಾರು ಡಿಕ್ಕಿಯಾದ ಪರಿಣಾಮ ಘಟನೆ ನಡೆದಿದ್ದು ಘಟನೆ ಸಂಬಂಧ ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಕಾರಾಮ ನಿಧನಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಸಂತಾಪ.

ಭಾರತೀಯ ಜನತಾ ಪಕ್ಷದ ಗ್ರಾಮೀಣ ಘಟಕದ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ತಾಲ್ಲೂಕಿನ ದೇವಭಾಗದ ತುಕಾರಾಮ ಚೆಂಡೇಕರ ರಸ್ತೆ ಅಪಘಾತದಲ್ಲಿ ವಿಧಿವಶರಾಗಿರುವುದು ತೀವ್ರ ಆಘಾತಕ್ಕೆ ಕಾರಣವಾಗಿದೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಕಂಬನಿ ಮಿಡಿದಿದ್ದಾರೆ.
ಬಿಜೆಪಿಯ ಸಂಘಟನೆಯ ಜೊತೆಗೆ ಜನಪರವಾದ ಕಾರ್ಯಗಳಲ್ಲಿ ತೊಡಗಿಕೊಂಡು ಜನಾನುರಾಗಿಯಾಗಿದ್ದರು. ವಿಶೇಷವಾಗಿ ನಮ್ಮ ಕುಟುಂಬಕ್ಕೆ ಆತ್ಮೀಯರಾಗಿದ್ದರು. ಮೂಲತಃ ಚೆಂಡಿಯಾದವರಾದ ಅವರು ಶಾಲಾ ದಿನಗಳಲ್ಲೂ ನಮ್ಮ ಒಡನಾಡಿಯಾಗಿದ್ದ ಅವರನ್ನು ಕಳೆದುಕೊಂಡಿರುವುದು ತೀವ್ರ ನೋವಿಗೆ ಕಾರಣವಾಗಿದೆ.
ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಅವರ ಕುಟುಂಬದವರಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!