ಉತ್ತರಕನ್ನಡ ದಲ್ಲಿ ಅಬ್ಬರಿಸಿದ ಸಮುದ್ರ-ಕೊಚ್ಚಿಹೋದ ಮರಗಳು,ಯುವಕ ನೀರುಪಾಲ.

969

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಮಳೆಯ ಅಬ್ಬರ ಮುಂದುವರೆದಿದ್ದು ಇದೇ ತಿಂಗಳ 15 ರ ವರೆಗೆ ರೆಡ್ ಅಲರ್ಟ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಭೋರ್ಗರೆತ ಹೆಚ್ಚಾಗಿದ್ದು ಘಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಅಲೆಗಳು ಏಳತೊಡಗಿದೆ.

ಇದರಿಂದಾಗಿ ಸಮುದ್ರ ಕೊರೆತ ಪ್ರಾರಂಭವಾಗಿದ್ದು, ಕಾರವಾರ ಕಡಲತೀರ ಭಾಗದಲ್ಲಿ ಮರಗಳು,ತಡೆಗೋಡೆ ಸಮುದ್ರದಲ್ಲಿ ಕೊಚ್ಚಿಹೋಗಿವೆ. ಇನ್ನು ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸಂಪ್ರದಾಯಿಕ ಮೀನುಗಾರಿಗೆ ನಿರ್ಬಂಧ ವಿಧಿಸಲಾಗಿದ್ದು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಸದ್ಯ ಮಳೆಗಿಂತ ಸಮುದ್ರದ ಆರ್ಭಟ ಹೆಚ್ಚಿದ್ದು ಇದರಿಂದಾಗಿ ಕಡಲ ಕೊರತ ಸಹ ಕರಾವಳಿ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಪ್ರಾರಂಭವಾಗಿದೆ.

ಕೈತೊಳೆಯಲು ಹೊಳೆಯಲ್ಲಿ ಇಳಿದ ಯುವಕ ನೀರುಪಾಲು

ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ಯುವಕ ನೀರು ಪಾಲಾಗಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿಯ ಹೊಳೆಯಲ್ಲಿ ನಡೆದಿದೆ.ಶ್ರೀಧರ ದೇವಾಡಿಗ (40) ನೀರು ಪಾಲಾದ ವ್ಯಕ್ತಿಯಾಗಿದ್ದು ಇಂದು ಮಧ್ಯಾನ ಗದ್ದೆ ಕೆಲಸ ಮಾಡಿ ಕೈಕಾಲು ತೊಳೆಯಲು ಪಕ್ಕದಲ್ಲೇ ಇದ್ದ ಹೊಳೆಗೆ ಇಳಿದಿದ್ದಾನೆ.

ಈ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದು ಸಾವು ಕಂಡಿದ್ದಾನೆ.ಸದ್ಯ ಆತನ ಶವಕ್ಕಾಗಿ ಸ್ಥಳೀಯರು‌ ಮತ್ತು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು ಈವರೆಗೂ ಆತನ ಶವ ಪತ್ತೆಯಾಗಿಲ್ಲ.ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!