ಶಿಕ್ಷಣ ಸುಧಾರಣೆಗೆ ಶಿರಸಿ ಮೂಲದ ನಿಲೇಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ: ಮೋದಿ ಘೋಷಣೆ.
ನವದೆಹಲಿ: ಶಿಕ್ಷಣ ಸುಧಾರಣೆಗಾಗಿ ನಂದನ್ ನಿಲೇಕಣಿ (Nandan Nilekani) ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಘೋಷಿಸಿದ್ದಾರೆ.
ಇದನ್ಬೂ ಓದಿ:-Sirsi:20 ಸಾವಿರ ಮೌಲ್ಯದ ಗಾಂಜಾ ವಶ -ಆರೋಪಿ ಬಂಧನ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬಳಿಕ ಪ್ರಧಾನಿ ಮೋದಿ 3ನೇ ವೀಡಿಯೋ ಹಂಚಿಕೊಂಡಿದ್ದಾರೆ. ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದ ಕಾರ್ಯಪಡೆಯು ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಹೇಗೆ ಸುಧಾರಿಸುವುದು ಎಂಬುದನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿಯನ್ನು ನೀಡಲಿದೆ ಎಂದು ತಿಳಿಸಿದ್ದಾರೆ.
ಆ ವರದಿಯ ಆಧಾರದ ಮೇಲೆ, ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಡಲಾಗುವುದು ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.
ನಂದನ್ ನಿಲೇಕಣಿ ರವರು ಈ ಹಿಂದೆ ಆಧಾರ್ ಕಾರ್ಡ ಗಳನ್ನ ದೇಶದಲ್ಲಿ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ನೀಲಕಣಿಯ ನಂದನ್ ನಿಲೇಕಣಿ ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದಿದ್ದು ,ಸಧ್ಯ ಬೆಂಗಳೂರಿನಲ್ಲೇ ಜೀವನ ಸಾಗಿಸುತಿದ್ದಾರೆ.
