ಉಡುಪಿ ,ಪೆಬ್ರವರಿ 07:- ಹಸುವಿನ ಮೈ ಮೇಲಿನ ಉಣ್ಣೆಗಳನ್ನು ನಿವಾರಣೆ ಮಾಡುವ ವಿಷದ ಬಾಟಲನ್ನು ನಾಗರಹಾವು ನುಂಗಿದ ವಿಚಿತ್ರ ಘಟನೆ ಉಡುಪಿಯ(udupi) ನೀರೆ ಬೈಲೂರಿನಲ್ಲಿ ನಡೆದಿದೆ.
ಇದನ್ನು ಗಮನಿಸಿದ ಸ್ಥಳೀಯರೊಬ್ವರು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಉರುಗ ತಜ್ಞ ಹಾವನ್ನು ಹಿಡಿದು ವಿಷದ ಬಾಟಲ್ ಹೊರ ತೆಗೆದು ರಕ್ಷಣೆ ಮಾಡಿ ನಂತರ ನೀರೆ ಬೈಲೂರು ಸಮೀಪ ಕಾಡಿಗೆ ಬಿಡಲಾಗಿದೆ.