ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ (Honnavara)
ಕಾಸರಕೋಡ ಬಳಿ ಖಾಸಗಿ ಬಂದರಿಗೆ ರಸ್ತೆ ನಿರ್ಮಾಣ ಮಾಡುವುದಕ್ಕಾಗಿ ಸರ್ವೆ ನಡೆಸಲು ಬಂದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ 15ಕ್ಕೂ ಹೆಚ್ಚು ಮೀನುಗಾರರನ್ನು ಬಂಧಿಸಿದ ಘಟನೆ ನಡೆದಿದೆ.
ಇದನ್ನೂ ಓದಿ:-ಶಿರಸಿಯಲ್ಲಿ ಮತಾಂತರಕ್ಕೆ ಯತ್ನ -ಆರು ಜನರ ಬಂಧನ
ಖಾಸಗಿ ಬಂದರಿಗೆ ರಸ್ತೆ ನಿರ್ಮಾಣ ಮಾಡಿದಲ್ಲಿ ಸಂಪ್ರದಾಯಿಕ ಮೀನುಗಾರರಿಗೆ ಹಾಗೂ ಸ್ಥಳೀಯ ಜನರು ತೊಂದರೆಗೆ ಸಿಲುಕುತ್ತಾರೆ. ಮನೆಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಮೀನುಗಾರರು ಪ್ರತಿಭಟನೆ ನಡೆಸುತಿದ್ದು ,200 ಕ್ಕೂ ಹೆಚ್ಚು ಪೊಲೀಸರನ್ನು ಜಿಲ್ಲಾಡಳಿತ ನಿಯೋಜನೆ ಮಾಡಿದ್ದು, ಪ್ರತಿಭಟನೆ ನಡೆಸಿದ ಮೀನುಗಾರರನ್ನು ಮನವೊಲಿಸಲು ಪ್ರಯತ್ನ ಪಟ್ಟರೂ ಕೇಳದಿದ್ದಾಗ ಬಂಧಿಸಲಾಯಿತು. ಈ ವೇಳೆ ಕೆಲವು ಪ್ರತಿಭಟನಾ ನಿರತ 20 ಕ್ಕೂ ಹೆಚ್ಚು ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.ಘಟನೆ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:- Loksabha| ನಮ್ಮ ದೇಶವನ್ನಾಳಿದ ಪ್ರಧಾನಿಗಳೆಷ್ಟು ಗೊತ್ತಾ? ಚುನಾವಣೆ ಹೊಸ್ತಿಲಲ್ಲಿ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.