ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (KS Eshvarappa)ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಈ ಸಂಬಂಧ ಬಿಜೆಪಿ(Bjp) ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಇಂದು ಆದೇಶ ಹೊರಡಿಸಿದ್ದಾರೆ.
ಪಕ್ಷ ನೀಡಿದ ಆದೇಶದಲ್ಲಿ ಏನಿದೆ?
ಸ್ವ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದಾರೆ. ಇದರಿಂದ ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಿಗೊಳಿಸಲಾಗಿದೆ. ಅಲ್ಲದೆ ಆರು ವರ್ಷ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೋರ್ಟ ನಲ್ಲಿ ಮೋದಿ!
ಇನ್ನು ಈಶ್ವರಪ್ಪನವರು ನರೇಂದ್ರ ಮೋದಿ ಭಾವಚಿತ್ರ ಬಳಸಿ ಪ್ರಚಾರ ನಡೆಸುತ್ತಿರುವುದಕ್ಕೆ ಕೂಡ ಬಿಜೆಪಿ ತಕರಾರಿ ಎತ್ತಿದ್ದು ಜಿಲ್ಲಾ ಬಿಜೆಪಿ ಈಶ್ವರಪ್ಪನವರ ವಿರುದ್ಧ ಕೋರ್ಟ್ (court) ಮೊರೆ ಹೋಗಿದೆ. ಇನ್ನು ಈ ವಿಚಾರವಾಗಿ ಕೋರ್ಟ ನಲ್ಲಿ ವಾದ ವಿವಾಧ ನಡೆಯುತಿದ್ದು ,ಮೊನ್ನೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲೂ ಸಹ ಈಶ್ವರಪ್ಪನವರು ನಕಲಿ ಮೋದಿಯನ್ನು ಕರೆಸಿ ಪ್ರಚಾರಕ್ಕೆ ಬಳಸಿಕೊಂಡಿದ್ದರು.