![](https://kannadavani.news/wp-content/uploads/2024/04/IMG-20240408-WA0030-724x1024.webp)
![](https://kannadavani.news/wp-content/uploads/2024/04/IMG-20240408-WA0031-724x1024.webp)
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (dandeli) ಹಾಗೂ ಶಿರಸಿಯಲ್ಲಿ(sirsi)ಪ್ರತ್ತೇಕ ಪ್ರಕರಣದಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಜಿಲ್ಲೆಯ ದಾಂಡೇಲಿಯಲ್ಲಿ ಬೆಳಗಾವಿಯಿಂದ ದಾಂಡೇಲಿಗೆ ಆಗಮಿಸುತಿದ್ದ ಮೂರು ಜನರಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಕಾರು ಸಂಪೂರ್ಣ ಸುಟ್ಟುಹೋದ ಘಟನೆ ನಾನಾಕೇಸರೋಡ ದಲ್ಲಿ ಇಂದು ನಡೆದಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಮೂರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
![](https://kannadavani.news/wp-content/uploads/2024/04/IMG-20240408-WA0018-1024x768.webp)
ಐದು ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದ್ದು ಘಟನೆ ಸಂಬಂಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಜಿಲ್ಲೆಯ ಶಿರಸಿ ನಗರದ ಕನ್ನಿಕಾ ಪ್ರಿಂಟಿಂಗ್ ಪ್ರಸ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಳಿಗೆಯಲ್ಲಿದ್ದ 15 ಲಕ್ಷಕ್ಕೂ ಹೆಚ್ಚಿನ ವಸ್ತುಗಳು ಬೆಂಕಿಗಾಹುತಿಯಾಗಿದ್ದು ,ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಘಟನೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.