BREAKING NEWS
Search

ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಕಾಗೇರಿಗೆ ಬೆಂಬಲ!

68

ಕಾರವಾರ:- ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಲೋಕಸಭಾ ಚುನಾವಣೆಯಲ್ಲಿ( Loksabha election 2024) ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಕನ್ನಡ ವಾಣಿ ಜೊತೆ ಮಾತನಾಡಿದ ಅವರು ಎಪ್ರಿಲ್ 4 ರಂದು ಕಾರವಾರದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರವರ ಸಭೆಯಲ್ಲಿ ಭಾಗವಹಿಸುವುದಾಗಿ ಅವರು ಹೇಳಿದರು.

ಈ ಹಿಂದೆ ಉತ್ತರ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಬೆಂಬಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆನಂದ್ ಆಸ್ನೋಟಿಕರ್ ನಂತರ ವಿಧಾನ ಸಭಾ ಚುನಾವಣೆಯಲ್ಲಿ ತಟಸ್ಥರಾಗಿದ್ದರು. ಇದಲ್ಲದೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಿ ಹಾಲಿ ಶಾಸಕ ಸತೀಶ್ ಸೈಲ್ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಕಾಣಲು ಕಾರಣೀಕರ್ತರಾಗಿದ್ದರು.

ಆದ್ರೆ ಇದೀಗ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬೆಂಬಲ ಸೂಚಿಸಿದ್ದು ಜಿಲ್ಲೆಯ ರಾಜಕಾರಣ ಬದಲಾಗಿದೆ.

ಸದ್ಯ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ ಅವರು ಇದೀಗ ಕಾರವಾರದಲ್ಲಿ ಏಪ್ರಿಲ್ ನಾಲ್ಕರ ನಂತರ ಚುನಾವಣಾ ಪ್ರಚಾರದ ಅಖಾಡಕ್ಕೆ ದುಮಕಲಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!