ಪ್ರಮುಖ ಸುದ್ದಿ
ಯುವತಿಯಿಂದ ಕಾಮಿಡಿ ಕಿಲಾಡಿ ಶಿವರಾಜ್ ಕೆ.ಆರ್.ಪೇಟೆ ವಿರುದ್ದ ದೂರು
By adminಏಪ್ರಿಲ್ 02, 2024, 08:16 ಫೂರ್ವಾಹ್ನ
94
ಬೆಂಗಳೂರು:- ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಶಿವರಾಜ್ ಕೆ.ಆರ್.ಪೇಟೆ ವಿರುದ್ಧ ಶಾರದಾ ಬಾಯಿ ಎಂಬುವವರು ಬೆಂಗಳೂರಿನ ಸುಬ್ರಮಣ್ಯನಗರ ಠಾಣೆಗೆ ದೂರು ನೀಡಿದ್ದಾರೆ. ಮಾರ್ಚ್ 30ರಂದು ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಶಿವರಾಜ್ ಕೆ.ಆರ್.ಪೇಟೆ ಅವಾಚ್ಯ ಶಬ್ದಗಳಿಂದ ನನ್ನ ನಿಂದಿಸಿದ್ದಾರೆ. ಅವಮಾನ ಮಾಡಿದ್ದಾರೆ. ಹಾಗಾಗಿ ಅವರನ್ನು ಠಾಣೆಗೆ ಕರೆದು, ಸೂಕ್ತ ಕ್ರಮ ತಗೆದುಕೊಳ್ಳುವಂತೆ ಮಹಿಳೆ ಕೋರಿದ್ದಾರೆ.
ದೂರಿನಲ್ಲಿ ಏನಿದೆ?
ಎಂದಿನಂತೆ ನಾನು ಬೆಳ್ಳಿಗ್ಗೆ 09-30ಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ, ರಾಜ್ಕುಮಾರ್ ರಸ್ತೆ 10ನೇ ಕ್ರಾಸ್ನ ಹಿಂಭಾಗದ ಪೆಟ್ರೋಲ್ ಬಂಕ್ ಹತ್ತಿರ ನನ್ನ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆಯಿತು. ಆ ನಂತರ ಯಾವಳೆ ನೀನು? ಅಲ್ಲಾಡಿಸಿಕೊಂಡು ಹೋಗ್ತಿಯಾ! ಎಂದು ಅವಾಚ್ಯ ಪದ ಬಳಸಿ ನಿಂದನೆ ಮಾಡಿದ್ದಾರೆ, ಸ್ನೇಹಿತರ ಜೊತೆಗೆ ನಗಾಡುತ್ತಾ ಹೋಗಿದ್ದಾರೆ. ಈ ಕಾರಣಕ್ಕೆ ಶಿವರಾಜ್ ಕೆ ಆರ್ ಪೇಟೆ, ಕಾರಿನ ಮಾಲೀಕ ಮತ್ತು ಸ್ನೇಹಿತರನ್ನು ಕರೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.
ಇನ್ನು ದೂರಿನ ಆದಾರದಲ್ಲಿ ಎನ್ ಸಿಆರ್ ದಾಖಲಿಸಿಕೊಂಡ ಪೊಲೀಸರು ಶಿವರಾಜ್ ಕೆ.ಆರ್. ಪೇಟೆ ಅವರಿಗೆ ನೊಟೀಸ್ ನೀಡಿ ಕರೆಸಿಕೊಂಡು ಠಾಣೆಯಲ್ಲಿ ಪ್ರಕರಣ ಇತ್ಯರ್ಥ ಮಾಡಿರುವುದಾಗಿ ತಿಳಿದುಬಂದಿದೆ.