BREAKING NEWS
Search

ಜೋಗದ ಬಳಿ ಈಜಲು ತೆರಳಿದ್ದ ಕೃಷಿ ಅಧಿಕಾರಿ,ಬ್ಯಾಂಕ್ ಉದ್ಯೋಗಿ ಸಾವು.

87

ಶಿವಮೊಗ್ಗ : ಈಜಲು ತೆರಳಿದ್ದ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ (Bank employe) ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ (joga) ಸಮೀಪದ ದೇವಿ ಗುಂಡಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಸಾಗರ ತಾಲೂಕಿನ ಕೃಷಿ ಅಧಿಕಾರಿ ಕೆ.ಟಿ.ಕುಮಾರ್ ಹಾಗೂ ಬ್ಯಾಂಕ್ ಉದ್ಯೋಗಿ ಅರುಣ್ ಎಂದು ಗುರುತಿಸಲಾಗಿದೆ.

ಮೃತಪಟ್ಟ ಕುಮಾರ್ ಹಾಗು ಅರುಣ್ ಕುಟುಂಬಸ್ಥರೊಂದಿಗೆ ಜೋಗ ಜಲಪಾತ ವೀಕ್ಷಣೆಗೆ ತೆರಳಿದ್ದರು. ಜೋಗ ಜಲಪಾತ ವೀಕ್ಷಣೆ ನಂತರ ಜೋಗ ಸಮೀಪದ ದೇವಿಗುಂಡಿ ಬಳಿ ಈಜಲು ತೆರಳಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕಾರ್ಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಕುರಿತು ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!