BREAKING NEWS
Search

SIRSI:ಕರಡಿ ದಾಳಿ:ಸ್ಥಳದಲ್ಲೇ ವ್ಯಕ್ತಿ ಸಾವು.

2031

ಕಾರವಾರ:-ಕರಡಿ ದಾಳಿಗೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ
ಶಿರಸಿ ತಾಲೂಕಿನ ದೇವನಹಳ್ಳಿಯಲ್ಲಿ ನಡೆದಿದೆ. ಓಂಕಾರ ಜೈನ್(52) ಕರಡಿ ದಾಳಿಗೆ ಮೃತಪಟ್ಟಿರುವ ವ್ಯಕ್ತಿಯಾಗಿದ್ದು ಕಾಡಿಗೆ ತೆರಳಿದ್ದಾಗ ಏಕಾ ಏಕಿ ಕರಡಿ ದಾಳಿ ನಡೆಸಿದೆ. ಈ ವೇಳೆ ಮರವನ್ನು ಹತ್ತಲು ಆತ ಪ್ರಯತ್ನ ಪಟ್ಟರೂ ಕರಡಿ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದ್ದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!