
ಕಾರವಾರ :- ಕಾಳಿ ನದಿಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಸೇತುವೆ ಕೆಳಗೆ ಪ್ರೇಮಿಗಳು ಬಿದ್ದು ನಾಪತ್ತೆಯಾದ ಘಟನೆ ಜೋಯಿಡಾ ತಾಲೂಕಿನ ಗಣೇಶಗುಡಿ ಬಳಿಯ ಸೂಪಾ ಡ್ಯಾಂ ಬಳಿ ಇರುವ ಕಾಳಿ ಸೇತುವೆ ಬಳಿ ಇಂದು ಸಂಜೆ ನಡೆದಿದೆ.
ಇಂದು ಸಂಜೆ ಗಣೇಶಗುಡಿಯ ಡ್ಯಾಮ್ ಭಾಗದಲ್ಲಿ ದಾಂಡೇಲಿಯಿಂದ ಆಟೋದಲ್ಲಿ ಬಂದು ಗಣೇಶಗುಡಿಯ ಸೂಫಾ ಡ್ಯಾಮ್ ಗೆ ಭೇಟಿ ನೀಡಿದ್ದ ಪ್ರೇಮಿಗಳು ಡ್ಯಾಮ್ ನ ಎದುರುಭಾಗದಲ್ಲಿ ಇರುವ ಸೇತುವೆಯ ಕಟ್ಟೆಯ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿದ್ದಾರೆ.
ಈ ವೇಳೆ ಇಬ್ಬರೂ ಕಾಲುಜಾರಿ ಕಾಳಿ ನದಿಗೆ ಬಿದ್ದಿದ್ದು ತೇಲಿಹೋಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹಾಜುರಾಗಿ ಇವರಿಗಾಗಿ ಹುಡುಕಾಟ ನೆಡೆಸುತಿದ್ದಾರೆ. ಸದ್ಯ ಯುವತಿಯನ್ನು ಬೀದರ್ ಮೂಲದ ರಕ್ಷಿತಾ ಎಂದು ಗುರುತಿಸಲಾಗಿದ್ದು ಯುವಕನಬಗ್ಗೆ ತಿಳಿದುಬರಬೇಕಿದೆ.ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಬೇಕಿದೆ.