ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ವರ್ಗಾವಣೆ!

1990

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ (uttarakannada DST) ಜಿಲ್ಲಾಧಿಕಾರಿ (District Commissioner )ಮುಲ್ಲೈ ಮುಗಿಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಹರೀಶ್ ಕುಮಾರ್ ನಂತರ 2021 ಫೆಬ್ರವರಿ 7 ರಂದು ಉತ್ತರ ಕನ್ನಡಕ್ಕೆ ಡಿಸಿಯಾಗಿ ಆಗಮಿಸಿದ್ದ ಅವರು ಸರಳ ವ್ಯಕ್ತಿತ್ವ ಹಾಗೂ ಉತ್ತಮ ಆಡಳಿತಗಾರರಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇವರ ಜಾಗಕ್ಕೆ ಹಟ್ಟಿ ಗೋಲ್ಡ್‌ಮೈನ್ಸ್ ಕಂಪನಿಯ ನಿರ್ದೇಶಕರಾದ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ನಿಯೋಜಿಸಲಾಗಿದೆ.

ಪ್ರವಾಹ ಸಂದರ್ಭದಲ್ಲಿ ಹಾಗೂ ಕೋವಿಡ್ ಸಂದರ್ಭದಲ್ಲಿ ಮುಲೈ ಮುಗಿಲನ್ ರವರ ಕಾರ್ಯ ವನ್ನು ಇಡೀ ಜಿಲ್ಲೆಯ ಜನ ನೆನಪಿಟ್ಟುಕೊಳ್ಳುವಂತೆ ಮಾಡಿದ್ದು ಅವರ ದಿಡೀರ್ ವರ್ಗಾವಣೆ ಜಿಲ್ಲೆಯ ಜನರಿಗೆ ಬೇಸರ ಮೂಡಿಸುವಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!