ಕಾರವಾರ:ಯಾರು ನಮ್ಮನ್ನು ಹಿಂಬಾಲಿಸುತ್ತಾರೋ ಇಲ್ಲವೂ ಆದ್ರೆ ನಾವು ಹೋಗುವಾಗ ನಮ್ಮ ನೆರಳು ನಮ್ಮನ್ನು ಹಿಂಬಾಲಿಸುತ್ತದೆ. ಹೀಗಿರುವಾಗ ಆ ನೆರಳೇ ಮಾಯವಾದ್ರೆ ಹೇಗನಿಸುತ್ತದೆ ಹೇಳಿ. ಹೌದು ಇಂದು ಕಾರವಾರದಲ್ಲಿ ಅಂತ ಅದ್ಭುತವೊಂದು ನಡೆಯಿತು.
ಚಿತ್ರದಲ್ಲಿ ಸಮಯದ ಪ್ರಕಾರ ಕೆಳಗೆ ನೀಡಲಾಗಿದೆ.

ಹೌದು, ಕಾರವಾರದಲ್ಲಿ ಇಂದು ಇಂತಹದೊಂದು ಶೂನ್ಯ ನೆರಳಿನ ವಿಜ್ಞಾನದ ಕೌತುಕ ಕಂಡುಬಂತು.
ನಗರದ ಕೋಡಿಬಾಗದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕಂಬವೊಂದನ್ನು ಬಿಸಿಲಿನಲ್ಲಿ ಇಟ್ಟು ಇದನ್ನು ಪತ್ತೆ ಹಚ್ಚಲಾಯಿತು. ಇಲ್ಲಿ ಅವುಗಳ ನೆರಳು ಅಕ್ಕಪಕ್ಕ ಎಲ್ಲೂ ಬೀಳಲಿಲ್ಲ.
ಸಾಮಾನ್ಯವಾಗಿ ಶೂನ್ಯ ನೆರಳಿನ ದಿನದಂದು ನೆರಳು ಅಕ್ಕಪಕ್ಕದಲ್ಲಿ ಎಲ್ಲೂ ಕಾಣಿಸದು.
ಕರ್ಕಾಟಕ ವೃತ್ತದ ಮತ್ತು ಮಕರ ಸಂಕ್ರಾಂತಿ ವೃತ್ತದ ನಡುವೆ ಇರುವ ಪ್ರದೇಶಗಳಲ್ಲಿ ವರ್ಷದಲ್ಲಿ ಎರಡು ಬಾರಿ ಶೂನ್ಯ ನೆರಳಿನ ದಿನ ಕಾಣಬಹುದಾಗಿದೆ.


ಸೂರ್ಯನು ಉತ್ತರಾಯಣದಿಂದ ದಕ್ಷಿಣಾಯನಕ್ಕೆ ಹಾಗೂ ದಕ್ಷಿಣಾಯದಿಂದ ಉತ್ತರಾಯಣಕ್ಕೆ ಹಾದು ಹೋಗುವ ವೇಳೆ ಮಾತ್ರ ಈ ಅಪರೂಪದ ವಿದ್ಯಮಾನ ನಡೆಯುತ್ತದೆ. ಇಂದು ಸೂರ್ಯ ನಡು ನೆತ್ತಿಯ ಮೇಲಿದ್ದರಿಂದ (ಮಧ್ಯಾಹ್ನ 12.31ರಿಂದ 2:00 ನಡುವೆ) ಯಾವುದೇ ವಸ್ತುವಿನ ನೆರಳು ನೆಲಕ್ಕೆ ಬೀಳಲಿಲ್ಲ.
ಶೂನ್ಯ ನೆರಳಿನ ಸಮಯ ಪ್ರದೇಶದಿಂದ ಪ್ರದೇಶಕ್ಕೆ ಕೆಲ ನಿಮಿಷಗಳ ವ್ಯತ್ಯಾಸವನ್ನು ಹೊಂದಿದೆ. ಈ ಬಾರಿ ಕಾರವಾರ, ಯಲ್ಲಾಪುರ, ಹಾವೇರಿ ಹಾಗೂ ಆಂದ್ರಪ್ರದೇಶದ ಕೆಲ ಭಾಗಗಳಲ್ಲಿ ಮಾತ್ರ ಈ ವಿಜ್ಞಾನದ ಕೌತುಕ ಕಂಡುಬಂದಿದೆ.
ಪ್ರತಿವರ್ಷ ಈ ವಿಶೇಷ ಕೌತುಕವನ್ನು ವಿದ್ಯಾರ್ಥಿಗಳು ಕೂಡ ವೀಕ್ಷಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾದಿಂದಾಗಿ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ವೀಕ್ಷಿಸಲು ಸೂಚಿಸಲಾಗಿದೆ. ನಾವು ಇಲ್ಲಿ ಕಲೆ ಹಾಕಿದ ಮಾಹಿತಿಯನ್ನು ಬೆಂಗಳೂರಿನ ಜವಹರಲಾಲ್ ನೆಹರು ಕೇಂದ್ರಕ್ಕೆ ಕಳುಹಿಸುವುದಾಗಿ ಕಾರವಾರ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಸಂಜೀವ್ ದೇಶಪಾಂಡೆ ತಿಳಿಸಿದರು.
ಅಂದಹಾಗೆ ವರ್ಷದಲ್ಲಿ ಎರಡು ಬಾರಿ ಈ ಶೂನ್ಯ ನೆರಳಿನ ದಿನ ಬರುತ್ತದೆ. ಇಂತಹ ಪ್ರಕೃತಿ ವಿಸ್ಮಯ ಎಲ್ಲಾ ಭಾಗದಲ್ಲೂ ಕಾಣಸಿಗುವುದಿಲ್ಲ . ಅಂತದರಲ್ಲಿ ಕಾರವಾರದಲ್ಲಿ ಇಂದು ಕಂಡಿದ್ದು ವಿಜ್ಞಾನಿಗಳಿಗೆ ಸೂರ್ಯ ಹಾಗೂ ಭೂಮಿಯ ಮತ್ತಷ್ಟು ಅಧ್ಯಯನಕ್ಕೆ ಸಹಕಾರಿಯಾಯ್ತು.